ಬೆಳ್ತಂಗಡಿ: ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.
ಉಜಿರೆ ಉದ್ಯಮಿಯೋರ್ವರ 8 ವರ್ಷದ ಮಗು ಸಂಜೆ 6.30ರ ಸುಮಾರಿಗೆ ಉಜಿರೆ ರಥಬೀದಿ ಸಮೀಪ ಆಟವಾಡುತ್ತಿರುವ ಸಂದರ್ಭ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಬೆಂಗಳೂರು: ಕುಡಿತದ ಅಮಲಿನಲ್ಲಿ ಪೋಲೀಸರ ಮೇಲೆ ಹಲ್ಲೆ | ಎಂಎಲ್ಸಿ ನಾಸಿರ್ ಅಹಮದ್ ಪುತ್ರನ ಬಂಧನ!
ಸ್ಥಳೀಯರ ಹೇಳಿಕೆಯಂತೆ ಅಪಹರಣಕಾರರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರೆಂದು ಹೇಳಲಾಗಿದೆ ಅಲ್ಲದೆ ಚಾರ್ಮಾಡಿ ರಸ್ತೆಯಾಗಿ ತೆರಳಿರುವ ಕುರಿತು ಮಾಹಿತಿ ರವಾನೆಯಾಗುತ್ತಿದೆ. ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಇಂಡಿಕಾ ಕಾರ್ನಲ್ಲಿ ಅನುಭವ್ ಕಿಡ್ನಾಪ್ ಆಗಿರುವುದಾಗಿ ತಿಳಿದುಬಂದಿದೆ. ಪೊಲೀಸ್ ತಂಡಗಳಿಂದ ಶೋಧ ಕಾರ್ಯಚರಣೆ ನಡೆಯುತ್ತಿದೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದು, ಮಗು ಅಪಹರಣ ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಲಾರಂಬಿಸಿದೆ.
BREAKING| ಉಡುಪಿ : ಹಿರಿಯ ವಿದ್ವಾಂಸ ಪದ್ಮಶ್ರೀ ಡಾ| ಬನ್ನಂಜೆ ಗೋವಿಂದಾಚಾರ್ಯ ನಿಧನ