ನವದೆಹಲಿ: ಲೋಕಸಭೆಯು ಗುರುವಾರ ಅಂಗೀಕರಿಸಿದ ಎರಡು ಕೃಷಿ ಮಾರುಕಟ್ಟೆ ಸುಧಾರಣಾ ಮಸೂದೆಗಳನ್ನು “ರೈತ ವಿರೋಧಿ” ಎಂದು ಶಿರೋಮಣಿ ಅಕಾಲಿ ದಳ (ಎಸ್ಎಡಿ) ಸಂಸದೆ ಮತ್ತು ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಿದರು.
ಅವರ ಪಕ್ಷವು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಳೆಯ ಮಿತ್ರಪಕ್ಷಗಳಲ್ಲಿ ಒಂದಾಗಿದೆ ಮತ್ತು ಬಾದಲ್ ಅವರು ಮೋದಿ ಸರ್ಕಾರದಲ್ಲಿ ಆ ಪಕ್ಷದ ಏಕೈಕ ಸಂಸದೆಯಾಗಿದ್ದರು.
I have resigned from Union Cabinet in protest against anti-farmer ordinances and legislation. Proud to stand with farmers as their daughter & sister.
— Harsimrat Kaur Badal (@HarsimratBadal_) September 17, 2020
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, “ರೈತ ವಿರೋಧಿ ಮಸೂದೆಗಳನ್ನು ಮತ್ತು ಕಾಯಿದೆಗಳನ್ನು ವಿರೋಧಿಸಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದರು. “ರೈತರ ಮಗಳು ಮತ್ತು ಸಹೋದರಿಯಾಗಿ ನಿಲ್ಲಲು ಹೆಮ್ಮೆಪಡುತ್ತೇನೆ” ಎಂದಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜೀನಾಮೆ ನೀಡುವ ನಾಲ್ಕು ಪುಟಗಳ ಪತ್ರದಲ್ಲಿ, “ನನ್ನ ನಿರ್ಧಾರವು ನನ್ನ ಪಕ್ಷದ ದೃಷ್ಟಿಯಾಗಿದೆ. ಅದರ ಅದ್ಭುತ ಪರಂಪರೆ ರೈತರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಯಾವುದೇ ಮಟ್ಟಿಗೆ ಹೋಗುವ ಬದ್ಧತೆಯನ್ನು ಸಂಕೇತಿಸುತ್ತದೆ” ಎಂದು ಬರೆದಿದ್ದಾರೆ.
ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, 2020 ಮತ್ತು ರೈತ (ಸಬಲೀಕರಣ ಮತ್ತು ಸಂರಕ್ಷಣೆ)ರಿಗೆ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ರ ವಿರುದ್ಧ ರೈತ ಗುಂಪುಗಳು, ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರತಿಭಟನೆ ನಡೆಸಿವೆ.