ಇಂದು ಬೆಂಗಳೂರಿನ 1,315 ಸೇರಿದಂತೆ, ರಾಜ್ಯದಲ್ಲಿ ಸತತ ಆರನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಇಂದಿನ 2,738 ಸೇರಿ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41,581 ಗೆ ಏರಿಕೆಯಾಗಿದ್ದು, 24,572 ಸಕ್ರಿಯ ಪ್ರಕರಣಗಳಿವೆ.
ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗುತ್ತಿದ್ದು, ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,052 ಗೆ ಏರಿದೆ. ದಕ್ಷಿಣ ಕನ್ನಡ (1,4189) ಮತ್ತು ಧಾರವಾಡ (722) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.
ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 19,000 ದಾಟಿದ್ದು, ಹಲವರ ಸೋಂಕಿನ ಮೂಲವೇ ಸಿಗದಿರುವುದು ಸರ್ಕಾರಕ್ಕೆ ತಲೆ ನೋವುಂಟುಮಾಡಿದೆ.
ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು 839 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 16,248 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು ದಾಖಲೆಯ 73 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 757 ಸೋಂಕಿತರು ಸಾವನ್ನಪ್ಪಿದ್ದಾರೆ.