ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರಲ್ಲಿ ಕೊರೋನವೈರಸ್ ಇರುವುದು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಿವಾಸಿಯಾಗಿರುವ ಇವರು, ತಮ್ಮ ಮನೆಯಲ್ಲಿ ಕೆಲಸ ಮಾಡುವ ಸೇವಕಿಯಿಂದ ಸೋಂಕು ತಗುಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅವರ ಪತ್ನಿ ಕೂಡ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ಮತ್ತು ಅವರ ಪತ್ನಿ ಇಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರು ಕ್ಷೇಮವಾಗಿದ್ದಾರೆ : ಹಿರಿಯ ಮಗನಿಂದ ಸ್ಪಷ್ಟನೆ
ಮುಂಜಾಗ್ರತಾ ಕ್ರಮವಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಕ್ಷೇಮವಾಗಿದ್ದಾರೆ ಎಂದು ಅವರ ಹಿರಿಯ ಪುತ್ರ ಸಂತೋಷ್ ಜೆ. ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಅವರಲ್ಲಿ ಕೋವಿಡ್-19 ಸೋಂಕಿಗೆ ಸಂಬಂದಿಸಿದಂತೆ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಅವರು ಆದಷ್ಟು ಶೀಘ್ರ ಗುಣಮುಖರಾಗಲಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿರುವ ಸಂತೋಷ್ ಜೆ.ಪೂಜಾರಿ, ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಲು ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ.