ತಮಿಳು ಚಲನಚಿತ್ರ ನಟ ರಜನಿಕಾಂತ್ ಅವರು ಇಂದು ತಮ್ಮ ರಜನಿ ಮಕ್ಕಲ್ ಮಂದಿರದ ಹಿರಿಯ ಪದಾಧಿಕಾರಿಗಳನ್ನು ಭೇಟಿಯಾದರು. ಬಳಿಕ ಮಾತನಾಡಿದ ಅವರು, “ಚುನಾವಣಾ ರಾಜಕೀಯದ ಬಗ್ಗೆ ಅವರ ಯೋಜನೆಗಳ ಕುರಿತು ಶೀಘ್ರದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ” ಎಂದು ಹೇಳಿದರು. ರಾಜಕೀಯಕ್ಕೆ ಪ್ರವೇಶಿಸದಂತೆ ಅವರಿಗೆ ವೈದ್ಯರು ಸಲಹೆ ನೀಡಿದ್ದರೂ, ಅವರ ಈ ಘೋಷಣೆ ಬಂದಿದೆ.
“ಜಿಲ್ಲಾ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಾನು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಅವರು ಒಪ್ಪುತ್ತಾರೆ ಎಂದು ಅವರು ಹೇಳಿದ್ದಾರೆ. ನನ್ನ ನಿರ್ಧಾರವನ್ನು ಆದಷ್ಟು ಬೇಗ ಪ್ರಕಟಿಸುತ್ತೇನೆ” ಎಂದು 69 ವರ್ಷದ “ತಲೈವಾ”, ಚೆನ್ನೈನ ಪೋಸ್ ಗಾರ್ಡನ್ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ರಜನಿ ಮಕ್ಕಲ್ ಮಂದಿರದ ಜಿಲ್ಲಾ ಕಾರ್ಯದರ್ಶಿಗಳನ್ನು ನಗರದ ಮ ರಾಘವೇಂದ್ರ ಕಲ್ಯಾಣ ಮಂಡಪಂನಲ್ಲಿ ಇಂದು ಭೇಟಿಯಾದ ನಂತರ ಅವರು ಮಾತನಾಡಿದರು.
ನಟ ತನ್ನ ನಿರ್ಧಾರವನ್ನು ಸಾರ್ವಜನಿಕರಿಗೆ ತಿಳಿಸಲು ಇನ್ನೂ ಯಾವುದೇ ಸಮಯವನ್ನು ನಿಗದಿಪಡಿಸಿಲ್ಲ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ