ಬೆಂಗಳೂರು ಸೆ. 11: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದಾರೆ.
ನಾನು #Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.@PMOIndia
— Suresh Angadi (@SureshAngadi_) September 11, 2020
ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ರೈಲು ನಿಲ್ದಾಣ ನಾಮಕರಣ ಸಂಬಂಧಿದಂತೆ ಸಂತಸ ಹಂಚಿಕೊಂಡು ಮಾತನಾಡಿ ಹೇಳಿಕೆ ನೀಡಿದ್ದ ಸುರೇಶ್ ಅಂಗಡಿಯವರು ದೆಹಲಿಗೆ ಪ್ರಯಾಣಿಸುತ್ತಿದ್ದಂತೆ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.