ಹೊಸದಿಲ್ಲಿ ಸೆ.23: ಬೆಳಗಾವಿ ಸಂಸದ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ನಿಧನ ಹೊಂದಿದ್ದಾರೆ.
ಯಾವುದೇ ಗುಣಲಕ್ಷಣಗಳನ್ನು ಹೊಂದಿರದಿದ್ದರೂ, ಕೋವಿಡ್ ಸೋಂಕಿಗೆ ಒಳಗಾದ ಸುರೇಶ್ ಅಂಗಡಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ 65 ವರ್ಷದ ಸಂಸದ ಇಂದು ಸಾಯಂಕಾಲ ಮೃತಪಟ್ಟಿದ್ದಾರೆ ಎಂಬ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ದೊರಕಿದೆ.
ಕೊರೋನಾಗೆ ಬಲಿಯಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ
ಸುರೇಶ್ ಅಂಗಡಿಯವರು ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಬಾವುಟ ಹಾರಿಸಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.