ತೋಕೂರು: ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ),ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ 10 ನೇ ತೋಕೂರು ಗ್ರಾಮದ ನಾರಾಯಣ ಕೋಟ್ಯಾನ್ ರವರ ಜಾಗದ ಬಳಿ, ರಾಜ ಕಾಲುವೆಯಲ್ಲಿ ಕಿಂಡಿ ಅಣೆಕಟ್ಟಿಗೆ ಹಾಕಲಾದ ಹಲಗೆಗಳನ್ನು ತೆಗೆದು,ಸಂಗ್ರಹವಾಗಿದ್ದ ಮರದ ಕೊಂಬೆಗಳನ್ನು, ತ್ಯಾಜ್ಜ ವಸ್ತುಗಳನ್ನು ಸ್ವಚ್ಛಗೊಳಿಸಿ, ಶ್ರಮದಾನ ನಡೆಸಿ ಹೊರತೆಗೆಯಲಾಯಿತು.
ಇದನ್ನೂ ಓದಿ: ತನು ಎಲೆಕ್ಟ್ರಿಕಲ್ಸ್ ಹಾಗೂ ತೋಕೂರು ಸ್ಪೋರ್ಟ್ಸ್ ಕ್ಲಬ್ ಸಹಕಾರದಲ್ಲಿ ಉಚಿತ ವಿದ್ಯುತ್ ಸಂಪರ್ಕದ ವ್ಯವಸ್ಥೆ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಸದಸ್ಯರಾದ ಶ್ರೀ ಮೋಹನ್ ದಾಸ್, ಶ್ರೀ ಸಂತೋಷ್ ಕುಮಾರ್, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ, ಉಪಾಧ್ಯಕ್ಷರು ಶ್ರೀ ದೀಪಕ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಶ್ರೀ ಜಗಧಿಶ್ ಕುಲಾಲ್, ಕಾರ್ಯಾಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಪರಿಸರ ಸಂರಕ್ಷಣಾ ಕಾರ್ಯದರ್ಶಿ ಶ್ರೀ ಸುನಿಲ್ ದೇವಾಡಿಗ, ಸದಸ್ಯರಾದ ಶ್ರೀ ಚಂದ್ರ ಸುವರ್ಣ, ಶ್ರೀ ರಮೇಶ್ ಕರ್ಕೇರ, ಅರ್ಫಾಜ್,ಶ್ರೀ ಸಂತೋಷ್ ದೇವಾಡಿಗ ಮತ್ತಿತರರು ಶ್ರಮದಾನದಲ್ಲಿ ಭಾಗವಹಿಸಿದರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ