Home Blog
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು "ಸುದ್ದಿವಾಣಿ" ವಾಟ್ಸಾಪ್ ಗುಂಪಿಗೆ ಸೇರಿ - ಸುದ್ದಿವಾಣಿ ಓದುಗರ ಬಳಗ
ಬಿಜೆಪಿ ಪಕ್ಷಕ್ಕೆ ಮತ್ತು ಸರಕಾರಕ್ಕೆ ಮುಜುಗರವುಂಟಾಗಬಾರದೆಂದು ರಾಜಿನಾಮೆ...
ದೆಹಲಿ: ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಶುರುವಾಗಿದೆ. ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ನಲ್ಲಿ ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. "ಏಮ್ಸ್ನಲ್ಲಿ ನನ್ನ ಮೊದಲ COVID-19 ಲಸಿಕೆ ತೆಗೆದುಕೊಂಡೆ" ಎಂದು ಪಿಎಂ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
"COVID-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ" ಎಂದು ಪಿಎಂ ಮೋದಿ ಅವರು ಲಸಿಕೆಯ ಮೊದಲ ಡೋಸ್ಅನ್ನು ತೆಗೆದುಕೊಳ್ಳುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಲಸಿಕೆ ತೆಗೆದುಕೊಳ್ಳಲು...
ಮಿಜಾರು: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೧ರ ಕುರಿತು ಪ್ಯಾನೆಲ್ ಡಿಸ್ಕಶನ ನಡೆಯಿತು. ಕಂದಾಯ, ಉದ್ಯಮ, ಕೃಷಿ, ಇನ್ಫ್ರಾಸ್ಟಕ್ಚರ್, ಬ್ಯಾಂಕಿAಗ್, ಟೂರಿಸಮ್, ರಕ್ಷಣಾ ಕ್ಷೇತ್ರಗಳನ್ನು ಪ್ರತಿನಿಧಿಸಿ ವಿವಿಧ ಕ್ಷೇತ್ರತಜ್ಞರು ತಮ್ಮ ವಾದಗಳನ್ನು ಮಂಡಿಸಿದರು.
ಆರ್ಥಿಕ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಭಾರತೀಯ ಕಂದಾಯ ಇಲಾಖೆಯ ಮಾಜಿ ಅಧಿಕಾರಿ ಜಯಪ್ರಕಾಶ್ ರಾವ್, "ಯಾವುದೇ ಬಜೆಟ್ ಆಗಲಿ, ಸರಕಾರವಾಗಲಿ ಆರ್ಥಿಕತೆಯ ಮೇಲೆ ಜನಸಂಖ್ಯಾ ಸ್ಫೋಟದ ಪರಿಣಾಮದ ಕುರಿತು ವಿಶ್ಲೇಷಿಸಿಲ್ಲ. ಇಲ್ಲಿಯವರೆಗೂ ಬಂದ ಯಾವುದೇ ಬಜೆಟ್ನಲ್ಲಿ ದೇಶದ ಪ್ರಜೆಯ ಆತ್ಮಾಭಿಮಾನದ ಕುರಿತು...
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್ನ್ನು ಆಯೋಜಿಸಲಾಗಿತ್ತು.
ಕಲಬುರಗಿಯ ಕೇಂದ್ರೀಯ ವಿವಿಯ ಸಂಗೀತ ಹಾಗೂ ಲಲಿತ ಕಲೆ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ ಜಯದೇವಿ ಜಂಗಮಶೆಟ್ಟಿ ಹಾಗೂ ಹಂಪಿಯ ಕನ್ನಡ ವಿವಿಯ ಸಂಶೋಧನಾ ವಿದ್ಯಾರ್ಥಿ ಜಯಮ್ಮ ದಾನಮ್ಮನ್ನವರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ ಎಸ್ ಉಪಸ್ಥಿತರಿದ್ದರು.
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಮೆಲ್ವಿನ್ ಮೆಂಡೋನ್ಸಾ, ಅಲ್ವಿನ್ ಮೆಂಡೋನ್ಸಾ ಹಾಗೂ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಕರೆಸ್ಪಾಂಡೆಟ್ ಆಗಿರುವ ಕೆವಿನ್ ಮೆಂಡೋನ್ಸಾ ಭಾಗವಹಿಸಿದ್ದರು.
ಪತ್ರಿಕೋದ್ಯಮದ ವಿವಿಧ ಆಯಾಮಗಳ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಸಲಾಯಿತು.
ಪತ್ರಿಕೋದ್ಯಮದ ವಿಸ್ತೃತ ಕರ್ಯವ್ಯಾಪ್ತಿಯ ಬಗ್ಗೆ ಮಾತನಾಡಿದ ಮೆಲ್ವಿನ್ ಮೆಂಡೋನ್ಸಾ, `ಪತ್ರಿಕೋದ್ಯಮವೆಂದರೆ ಕೇವಲ ಬರವಣಿಗೆ, ವರದಿಗಾರಿಕೆಯಲ್ಲ. ಇದನ್ನು ಹೊರತುಪಡಿಸಿದ ವಿಪುಲ ಅವಕಾಶಗಳು...
ತೋಕೂರು: ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ,ಮಂಗಳೂರು, ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ, ಇದರ ಆಶ್ರಯದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ), ತೋಕೂರು, ಹಳೆಯಂಗಡಿ, ಇದರ ಸಹಯೋಗದೊಂದಿಗೆ "ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಗಾರದ ಉಧ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ಜರಗಿತು.
ಈ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ವಿದ್ಯಾ ಎನ್. ಸಂಯೋಜಕರು ಕೋಮಲ್ ಸ್ಪರ್ಶ್ ಕೌನ್ಸಿಲಿಂಗ್ ಸೆಂಟರ್, ಮಂಗಳೂರು ಹಾಗೂ ಸಹಾಯಕ ಪ್ರಾಧ್ಯಾಪಕರು, ಮಾನವಿಕ ಹಾಗೂ ಸಮಾಜ ವಿಜ್ಞಾನ...
ನಾಗಪುರ: ಫೆ. 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟಾಗ್ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
ವಾಹನ ಮಾಲೀಕರು ಕೂಡಲೇ ಇ - ಪಾವತಿ ಸೌಲಭ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ ಶುಲ್ಕವನ್ನು ಪಾವತಿಸಲು ಅನುಕೂಲವಾಗುವ ಫಾಸ್ಟ್ಯಾಗ್ ಅನ್ನು ಕಡ್ಡಾಯಗೊಳಿಸಲಾಗಿದೆ. ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಎರಡುಪಟ್ಟು ಶುಲ್ಕ ಪಾವತಿಸಬೇಕಿದೆ.
ಇದನ್ನೂ ಓದಿ: ಮತಾಂತರಗೊಂಡ ದಲಿತರಿಗೆ ಯಾವುದೇ ಮೀಸಲಾತಿ ಸೌಲಭ್ಯ ಸಿಗುವುದಿಲ್ಲ: ಕೇಂದ್ರ ಸರ್ಕಾರ
ಫಾಸ್ಟ್ಯಾಗ್ ಕಡ್ಡಾಯಗೊಳಿಸುವುದರಿಂದ ಟೋಲ್ ಪ್ಲಾಜಗಳ...
ನವದೆಹಲಿ : ಪ್ಯಾಸೆಂಜರ್ ರೈಲುಗಳ ಸಂಚಾರ ಪುನಾರಂಭಿಸಲು ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ದೇಶದ್ಯಾಂತ್ಯ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಬಳಿಕ ಹಂತ ಹಂತವಾಗಿ ಶೇಕಡಾ 65 ಕ್ಕಿಂತ ಹೆಚ್ಚು ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿತು. ಆದರೆ, ಹೊಸ ರೈಲು ಸೇವೆಗಳನ್ನು ಕ್ರಮೇಣ ಸೇರಿಸುವ ಚಿಂತನೆ ನಡೆಸಿದ್ದು, ಎಲ್ಲಾ ಪ್ಯಾಸೆಂಜರ್ ರೈಲುಗಳ ಕಾರ್ಯಾಚರಣೆ ಪುನರಾರಂಭಕ್ಕೆ ಯಾವುದೇ ದಿನಾಂಕ ನಿಗದಿಪಡಿಸಲಾಗಿಲ್ಲ ಎಂದು ತಿಳಿಸಿದೆ.
ಭಾರತೀಯ ರೈಲ್ವೆ ಕಳೆದ ವರ್ಷ ಮಾರ್ಚ್ 23 ರಿಂದ ಎಲ್ಲಾ...
ಟಾಪ್ ಸುದ್ದಿ
ಇಬ್ಬರು ವಯಸ್ಕರು ಮದುವೆಯಾಗಲು ಇಚ್ಛಿಸಿದರೆ, ಪೋಷಕರ ಒಪ್ಪಿಗೆ ಅಗತ್ಯವಿಲ್ಲ : ಸುಪ್ರೀಂಕೋರ್ಟ್
Suddivani - 0
ನವದೆಹಲಿ (ಫೆ. 14): ಇಬ್ಬರು ವಯಸ್ಕರು ಪರಸ್ಪರ ಮದುವೆಯಾಗಲು ಒಪ್ಪಿಕೊಂಡಾಗ ಕುಟುಂಬ, ಸಮುದಾಯ ಅಥವಾ ಕುಲದ ಒಪ್ಪಿಗೆಯ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕರ್ನಾಟಕದ ಬೆಳಗಾವಿ ಜೋಡಿಯೊಂದರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕೌಲ್ ಮತ್ತು ನ್ಯಾ. ಹೃಷಿಕೇಶ್ ರಾಯ್ ಅವರಿದ್ದ ದ್ವಿಸದಸ್ಯ ಪೀಠವು, ತಮಗಿಷ್ಟವಾದ ಸಂಗಾತಿಗಳನ್ನು ಆಯ್ಕೆ ಮಾಡಿಕೊಂಡು ಮದುವೆಯಾಗಬಯಸುವ ವಯಸ್ಕರ ಹಕ್ಕನ್ನು ಪೋಷಕರು ಗೌರವಿಸಬೇಕು ಎಂದು ಸಲಹೆ ನೀಡಿದೆ. ಅಲ್ಲದೆ, ವಯಸ್ಕರಿಗಿರುವ ಹಕ್ಕನ್ನು ‘ವರ್ಗ ಗೌರವ’ ಅಥವಾ ‘ಗುಂಪು ಚಿಂತನೆ’ ಎಂಬ ಪರಿಕಲ್ಪನೆಗಳಿಂದ ಪ್ರಭಾವಿಸಬಾರದು ಎಂದು ಸೂಚಿಸಿದೆ.
ಈ ಪ್ರಕರಣದಲ್ಲಿ...
ಫೆಬ್ರವರಿ ೧೪ ಎಂದಾಕ್ಷಣ ಎಲ್ಲರ ತಲೆಗೆ ಹೊಳೆಯುವುದು ಪ್ರೇಮಿಗಳ ದಿನ. ವಿಶ್ವಾದ್ಯಂತ ವಿವಿಧ ರೀತಿಯಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ವಿಜೃಂಭಣೆಯಿಂದ ಕೂಡಿರುವ ಆಚರಣೆ ಇತ್ತೀಚಿನ ವರ್ಷಗಳಲ್ಲಿ ಭಾರತ ಸೇರಿದಂದ ಏಷ್ಯಾ ಖಂಡದಲ್ಲೂ ಪ್ರಾಮುಖ್ಯತೆ ಪಡೆಯುತ್ತಿದೆ. ನಿಜಕ್ಕೂ ಈ ಪ್ರೇಮಿಗಳ ದಿನದ ಇತಿಹಾಸ ಏನು? ಯಾಕಾಗಿ ಆಚರಿಸಲಾಗುತ್ತದೆ? ಭಾರತದಲ್ಲಿ ಏನಿದರ ಪ್ರಾಮುಖ್ಯತೆ? ಎಲ್ಲದಕ್ಕೂ ಇಲ್ಲಿದೆ ಉತ್ತರ.
ಸಾಮಾನ್ಯವಾಗಿ ಪ್ರೇಮಿಗಳು ಶುಭಾಶಯಗಳನ್ನು ರವಾನಿಸುವುದರ ಮೂಲಕ ಹಾಗೂ ಒಬ್ಬರಿಗಿನ್ನೊಬ್ಬರು ಉಡುಗೊರೆಯನ್ನು ನೀಡುವ ಮೂಲಕ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಸೈಂಟ್ ವ್ಯಾಲೆಂಟೈನ್ಸ್ ಡೇ ಎಂದು...